ಇಬ್ಬರು ಪೊಲೀಸರ ಸಸ್ಪೆಂಡ್

ತುಮಕೂರು: ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಅವರು ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ಹೊಸಬಡಾವಣೆ ಪೊಲೀಸ್ ಠಾಣೆಯ ಓರ್ವ ಹೆಡ್ ಕಾನ್‌ಸ್ಟೇಬಲ್ ಹಾಗೂ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಓರ್ವ ಕಾನ್‌ಸ್ಟೇಬಲ್‌ನನ್ನು ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಅವರು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ ನಾಲ್ಕು ಮಂದಿ ಪೊಲೀಸರನ್ನು ಕರ್ತವ್ಯ ಲೋಪದಡಿ ಅಮಾನತ್ತು ಮಾಡಲಾಗಿತ್ತು.

ಹಾಗೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಿಬ್ಬಂದಿಯನ್ನು ಸಹ ಬದಲಾವಣೆ ಮಾಡಿರುವುದಾಗಿ ತಿಳಿದು ಬಂದಿದೆ.